News Karnataka
Wednesday, June 07 2023
ಕ್ಯಾಂಪಸ್

ಆಳ್ವಾಸ್‌ನಲ್ಲಿ ನಾಯಕತ್ವ ತರಬೇತಿ ಕಾರ್ಯಕ್ರಮ

Leadership training program at alvas college
Photo Credit : News Karnataka

ಮೂಡುಬಿದಿರೆ: ಕಾನೂನಿನ ಶ್ರೇಷ್ಠತೆ(Importance of law) ಕಾಪಾಡುವುದು ಕೇವಲ ಕೋರ್ಟ್ಗಳ(Court) ಕೆಲಸವಲ್ಲ. ಪ್ರತಿ ನಾಗರಿಕನ ಜವಾಬ್ದಾರಿ/ ನ್ಯಾಯದಾನ ಪ್ರಕ್ರಿಯೆಯು ಬಾಹ್ಯ ಪ್ರಭಾವಿ ಅಂಶಗಳಿಂದ ಮುಕ್ತವಾಗಿರಬೇಕು. ನ್ಯಾಯಾಂಗವು ದೇಶಕ್ಕೆ ಅನೇಕ ಕೊಡುಗೆಗಳನ್ನು ನೀಡಿದೆ. ಈಚೆಗೆ ಕೆಲವೊಮ್ಮೆ ವಿಫಲ ಹಾಗೂ ವಿಳಂಬವಾಗಿದೆ ಎಂಬ ಭಾವನೆ ಹಲವರಿಗೆ ಕಾಡಿದೆ. ಇತ್ತ ಅಪರಾಧಗಳೂ ಹೆಚ್ಚುತ್ತಿವೆ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು.

ಆಳ್ವಾಸ್ ಗಣರಾಜ್ಯೋತ್ಸವದ (Republic Day)ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಬುಧವಾರ ಆಯೋಜಿಸಿದ ನಾಯಕತ್ವ(Leadership) ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕೆಲವು ರಾಜಕಾರಣಿಗಳು ತಮ್ಮ ಕರ್ತವ್ಯ ನಿರ್ವಹಿಸುವ ಬದಲಾಗಿ ಪರಸ್ಪರ ದೂಷಿಸಿಕೊಂಡು ಕಾಲಹರಣ ಮಾಡುವುದೇ ಸಮಸ್ಯೆಯಾಗಿದೆ. ಎಲ್ಲ ನಾಗರಿಕರು ಅಭಿಪ್ರಾಯ ನಿರೂಪಕರಾಗಿ ಪರಿವರ್ತನೆಗೊಳ್ಳಬೇಕಾದ ಅನಿವಾರ್ಯ ಎದುರಾಗಿದೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಮಂಗಳೂರು ನಗರ ಪೊಲೀಸ್ ಕಮಿಷನರ್ ಕೆ.ಶಶಿಕುಮಾರ್ ನಾಯಕತ್ವದ ಕುರಿತು ಉಪನ್ಯಾಸ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ(Alvas degree College) ಪ್ರಾಂಶುಪಾಲ ಡಾ.ಕುರಿಯನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಯನಾ, ಅಖಿಲಾ, ಶಶಾಂಕ್, ವೃಂದಾ, ಅಮೃತ, ಸದ್ವಿತಾ ನಿರೂಪಿಸಿದರು. ದಕ್ಷಿಣ ಕನ್ನಡದ ವಿವಿಧ ಕಾಲೇಜುಗಳಿಂದ ಆಗಮಿಸಿದ ಪದವಿಪೂರ್ವ ಹಾಗೂ ಪದವಿಯ 1400ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದರು.

News Karnataka

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *