News Karnataka
ಸಿಟಿಜನ್ ಕಾರ್ನರ್

ಪಣಪಿಲದಲ್ಲಿ ಜಯ -ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ

Jaya-vijaya jodukare kambala launched in panapila
Photo Credit : News Karnataka

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ (Jaya-Vijaya Jodukare Kambala) ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವನ್ನು ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ (Vimal Kumar Shetty) ಅವರು ಊರಿನ ದೈವಸ್ಥಾನ ಮತ್ತು ದೇವಸ್ಥಾನಗಳ ಪ್ರಸಾದ ಮತ್ತು ತೀರ್ಥವನ್ನು ಕರೆಗೆ ಹಾಕಿ ನಂತರ ದೀಪ ಬೆಳಗಿಸಿ ಶನಿವಾರ ಸಂಜೆ ಉದ್ಘಾಟಿಸಿ ಶುಭ ಹಾರೈಸಿದರು.

ಇದನ್ನ ಓದಿ: ಪಣಪಿಲದಲ್ಲಿ ಜಯ ವಿಜಯ ಜೋಡುಕರೆ ಕಂಬಳ

ಪಣಪಿಲ ಕಂಬಳ ಸಮಿತಿಯ ಗೌರವಾಧ್ಯಕ್ಷ ಶಾಸಕ ಉಮಾನಾಥ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಅಳಿಯೂರು ಕಂಬಳ ಸಮಿತಿಯ ಅಧ್ಯಕ್ಷ ಯುವರಾಜ್ ಹೆಗ್ಡೆ ನಂದೊಟ್ಟು, ಕಾರ್ಯಧ್ಯಕ್ಷ ಸುಭಾಶ್ಚಂದ್ರ ಚೌಟ, ಮಜಲೋಡಿಗುತ್ತು ಪ್ರಮೋದ್ ಆರಿಗ,ಅಳಿಯೂರು ಧರೆಗುಡ್ಡೆ ಗ್ರಾ.ಪಂನ ಅಧ್ಯಕ್ಷೆ ತುಳಸಿ ಮೂಲ್ಯ, ಉಪಾಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಸದಸ್ಯರಾದ ಮುನಿರಾಜ ಹೆಗ್ಡೆ, ಸಂತೋಷ್ ಪೂಜಾರಿ, ಜನಿತಾ, ದೀಕ್ಷಿತ್ ಪಣಪಿಲ ನೆಲ್ಲಿಕಾರು ಗ್ರಾ.ಪಂ.ಅಧ್ಯಕ್ಷೆ ಸುಶೀಲ, ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಜಿಲ್ಲಾ ಕಂಬಳ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ, ಅಳಿಯೂರು ಹೇಮಾ ರೈಸ್ ಮಿಲ್ ನ ಮಾಲಕರಾದ ಹೇಮಾ ಮತ್ತು ಕೆ.ಕೆ.ಪೂಜಾರಿ, ಇಟಲ ಸೋಮನಾಥೇಶ್ವರ ದೇವಸ್ಥಾನದ (Itala Somanatheshwar Temple) ಕಾರ್ಯಾಧ್ಯಕ್ಷ ಸುಕೇಶ್ ಶೆಟ್ಟಿ, ಉದ್ಯಮಿ ಪ್ರೇಮ್ ಕುಮಾರ್ ಜೈನ್, ಕಂಬಳದ ಕೋಣಗಳ ಯಜಮಾನ ರಂಜಿತ್ ಪೂಜಾರಿ, ಕಂಬಳ ಸಮಿತಿಯ ಉಪಾಧ್ಯಕ್ಷರುಗಳಾದ ರಮನಾಥ ಸಾಲ್ಯಾನ್, ರವಿ ಪೂಜಾರಿ, ಪ್ರವೀಣ್ ಕೋಟ್ಯಾನ್, ಜೊತೆ ಕಾರ್ಯದರ್ಶಿ ಯೋಗೀಶ್ ನಂದೊಟ್ಟು, ಕೋಶಾಧಿಕಾರಿ ಜಯಚಂದ್ರ ಎನ್ ಸದಸ್ಯ ಸಚಿನ್ ಪಣಪಿಲ, ಕಂಬಳದ ಮಾರ್ಗದರ್ಶಕರಾದ ವಿಜಯಕುಮಾರ್ ಕಂಗಿನ ಮನೆ(Vijayakumar kangina Mane) ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಸ್ವಾಗತಿಸಿದರು. ಗಣೇಶ್ ಬಿ.ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

News Karnataka

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *