News Karnataka
ರಾಜಕೀಯ

ಮಿಥುನ್ ರೈ ವಿವಾದಾತ್ಮಕ ಹೇಳಿಕೆ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Controversial Statement by Mithun Rai
Photo Credit : News Karnataka

ಮೂಡಬಿದಿರೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ (KPCC General Secretary), ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ (Mulki-Moodbidire Assembly Constituency) ಸಂಭಾವ್ಯ ಅಭ್ಯರ್ಥಿ ಮಿಥುನ್ ರೈ (Mithun Rai)ಅವರು ಮೂಡುಬಿದಿರೆ ಮಸೀದಿಯೊಂದರ ಸಮಾರಂಭದಲ್ಲಿ `ಉಡುಪಿ ಕೃಷ್ಣ ಮಠಕ್ಕೆ (Udupi Krishna Math)ಜಾಗ ನೀಡಿದ್ದು ಮುಸ್ಲಿಂ ರಾಜರು’ ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಫೆ.26ರಂದು ಮೂಡುಬಿದಿರೆ ತಾಲೂಕಿನ ಪುತ್ತಿಗೆ ನೂರಾನಿ ಮಸೀದಿಯ (Puttige Noorani Masjid)ನವೀಕೃತ ಮಸೀದಿಯಲ್ಲಿ `ನಮ್ಮೂರ ಮಸೀದಿ ನೋಡ ಬನ್ನಿ (Come see our mosque)’ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮಿಥುನ್ ರೈ ಸೌಹಾರ್ದತೆಯ ವಿಚಾರದಲ್ಲಿ ಮಾತನಾಡುವಾಗ, ಈ ಜಿಲ್ಲೆ ಸೌಹಾರ್ದತೆಯ ಇತಿಹಾಸ ಹೊಂದಿರುವ ಜಿಲ್ಲೆ, ಬಪ್ಪನಾಡು ದೇವಿ (Goddess of Bappanadu) ಒಲಿದದ್ದು ಬಪ್ಪ ಬ್ಯಾರಿಗೆ, ಕವತಾರಿನಲ್ಲಿನ ಕೊರಗಜ್ಜನ ಕಟ್ಟೆಗೆ ಅರ್ಚಕ ಮುಸ್ಲಿಂ ಸಮುದಾಯದವರು. ಉಡುಪಿ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜರು. ಅತ್ತೂರು ಚರ್ಚ್, ಸುಬ್ರಹ್ಮಣ್ಯ ದೇವಸ್ಥಾನ, ಉಳ್ಳಾಲ ದರ್ಗದಲ್ಲಿ ಸರ್ವಧರ್ಮದವರು ಪ್ರಾರ್ಥನೆ ಸಲ್ಲಿಸುತ್ತಾರೆ ಎಂದಿದ್ದಾರೆ. ಇದರ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ( Social network) ವೈರಲ್ ಆಗಿದ್ದು ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನ ಓದಿ: ಜೈನ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಪರೀಕ್ಷೆ ಶಿಬಿರ

ಮಠ ಕಟ್ಟಲು ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು’ ಎನ್ನುವ ಪೇಜಾವರ ಸ್ವಾಮೀಜಿಯವರು ಹಿಂದೆ ನೀಡಿದ ಹೇಳಿಕೆಯ ಪತ್ರಿಕೆಯ ವರದಿಯೊಂದರ ತುಣುಕು ಕೂಡ ಮಿಥುನ್ ರೈ ಅವರನ್ನು ಸಮರ್ಥಿಸಿಕೊಂಡು ಇದರೊಂದಿಗೆ ವೈರಲ್ (Viral) ಆಗುತ್ತಿದೆ.

News Karnataka

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *