News Karnataka
Wednesday, June 07 2023
ರಾಜಕೀಯ

ವ್ಯಾಪಕ ನಕಲಿ ಮತದಾನದ ಶಂಕೆ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

Photo Credit : News Karnataka

ಮೂಡುಬಿದಿರೆ : ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಲ್ಲಿ (Mulki-Moodbidire Constituency) ವ್ಯಾಪಕ ನಕಲಿ ಮತದಾನ ಮಾಡಲಾಗಿದೆ ಎಂಬ ಶಂಕೆಯೊಂದಿಗೆ ಮೂಡುಬಿದಿರೆಯ ಬಿಜೆಪಿ ಕಾರ್ಯಕರ್ತರು ಬುಧವಾರ ರಾತ್ರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಶೀಘ್ರ ತನಿಖೆ ನಡೆಸುವಂತೆ ಆಗ್ರಹಿಸಿದರು.

ಬುಧವಾರ ನಡೆದ ಚುನಾವಣೆಯ ಸಂದರ್ಭದಲ್ಲಿ ತೋಡಾರಿನ 87ನೇ ಮತಗಟ್ಟೆಯಲ್ಲಿ (87th Polling Station) ಜಾರ್ಖಂಡ್ ಮೂಲದ ಪ್ರಕಾಶ್ ರಜಕ ಎಂಬಾತ ತೋಡಾರಿನ ವ್ಯಕ್ತಿಯೋರ್ವರ ಗುರುತಿನ ಚೀಟಿಯನ್ನು ಹಿಡಿದುಕೊಂಡು ಮತಚಲಾವಣೆ ಮಾಡುವ ಸಂದರ್ಭದಲ್ಲಿ ಮತಗಟ್ಟೆಯ ಅಧಿಕಾರಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಇದನ್ನ ಓದಿ: ಕಾಂಗ್ರೆಸ್ ಗ್ಯಾರಂಟಿ ದುರದೃಷ್ಟಕರ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ

ಬಿಜೆಪಿ ಮಂಡಲಾಧ್ಯಕ್ಷ ಸುನೀಲ್ ಆಳ್ವ (Board President Sunil Alva) ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿ ಮಾತನಾಡಿ, ಇದೇ ರೀತಿ ವಾಲ್ಪಾಡಿ, ಪ್ರಾಂತ್ಯ, ಮಕ್ಕಿ ಸಹಿತ ಇತರ ಕೆಲವು ಕಡೆಗಳಲ್ಲಿ ಊರಿನಲ್ಲಿಲ್ಲದವರ ಹೆಸರಲ್ಲಿ ಕ್ಷೇತ್ರದಲ್ಲಿ ಸುಮಾರು 22ರಷ್ಟು ಮತಗಳು ಚಲಾವಣೆಯಾಗಿರುವ ಬಗ್ಗೆ ಸಂಶಯವಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಹಾಗೂ ಯಾವ ಮನೆಯವರು ಗುರುತಿನ ಚೀಟಿಯನ್ನು ನೀಡಿದ್ದಾರೋ ಮತ್ತು ಇಂತಹ ಕೃತ್ಯ ನಡೆಸಲು ಕಾರಣೀಕರ್ತರಾಗಿರುವವರನ್ನು ಬಂಧಿಸಬೇಕೆಂದು ಪೊಲೀಸರಲ್ಲಿ ಆಗ್ರಹಿಸಿದ್ದಾರೆ.

ಪುರಸಭಾ ಸದಸ್ಯ ರಾಜೇಶ್ ನಾಯ್ಕ್ (Municipal Member Rajesh Naik), ಹಿಂದೂ ಜಾಗರಣ ವೇದಿಕೆಯ ಸಮಿತ್ ರಾಜ್ ದರೆಗುಡ್ಡೆ ಸಹಿತ ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *